ಹುಬ್ಬಳ್ಳಿ: ಹುಧಾ ಅವಳಿನಗರದಲ್ಲಿ ಬೀದಿ ನಾಯಿಗಳ ಹಾವಳಿಯಿಂದಾಗಿ ಸಾರ್ವಜನಿಕರು ಭೀತಿಗೊಳ್ಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಶೀಘ್ರವೇ ಬೀದಿನಾಯಿಗಳ ಉಪಟಳಕ್ಕೆ ಹುಧಾ ಮಹಾನಗರ ಪಾಲಿಕೆ ಕಡಿವಾಣ ಹಾಕಬೇಕು ಇಲ್ಲದಿದ್ದರೆ ನಗರದ ಪಾಲಿಕೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಅಷ್ಪಾಕ್ ಕುಮಟಾಕರ್ ಎಚ್ಚರಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಅವಳಿನಗರದಲ್ಲಿ ನಿತ್ಯವು ಬೀದಿನಾಯಿಗಳ ಹಾವಳಿಗೆ ಸಣ್ಣಮಕ್ಕಳಿಂದ ವೃದ್ಧರವರೆಗೂ ನಲುಗುವಂತಾಗಿದೆ. ದ್ವಿಚಕ್ರ ವಾಹನ ಸವಾರರಿಗೆ ಬೆನ್ನತ್ತಿ ಅಪಘಾತಗೊಳಿಸಿದ ಉದಾಹರಣೆಗಳು ಸಾಕಷ್ಟಿವೆ. ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ನಲಗುವಂತಾಗಿದ್ದು, ಪಾಲಿಕೆ ಸೂಕ್ತ ಕ್ರಮ ಕೈಗೊಳ್ಳದೆ ವಿಳಂಬ ಧೋರಣೆ ಅನುಸರಿಸುತ್ತ