ಶಿವಮೊಗ್ಗ: ನ.24 ರಿಂದ ನ.30ರವರೆಗೆ ಕನ್ನಡ ರಾಜ್ಯೋತ್ಸವ ಸಪ್ತಾಹ ಕಾರ್ಯಕ್ರಮ, ಶಿವಮೊಗ್ಗದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್
ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಇವರ ಸಂಯುಕ್ತಾಶ್ರಯದಲ್ಲಿ ನ.24 ರಿಂದ ನ.30ರವರೆಗೆ ಕನ್ನಡ ರಾಜ್ಯೋತ್ಸವ ಸಪ್ತಾಹ ಕಾರ್ಯಕ್ರಮವನ್ನು ಜಿಲ್ಲಾದಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಹೇಳಿದರು. ಶನಿವಾರ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕನ್ನಡ ರಾಜ್ಯೋತ್ಸವದ ಸಪ್ತಾಹ ಕಾರ್ಯಕ್ರಮಕ್ಕೆ ನ.24ರಂದು ಚಾಲುಕ್ಯ ನಗರದ ಸಾಹಿತ್ಯ ಗ್ರಾಮದ ಕ.ಸಾ.ಪ. ಕೇಂದ್ರದಲ್ಲಿ ಉದ್ಘಾಟಿಸಲಾಗುವುದು. ನ.25ರಂದು ಭದ್ರಾವತಿಯಲ್ಲಿ ನ.26ರಂದು ತೀರ್ಥಹಳ್ಳಿಯಲ್ಲಿ ನ.27ರಂದು ಸೊರಬದಲ್ಲಿ , ನ.28ರಂದು ಶಿಕಾರಿಪುರದಲ್ಲಿ, ನ.29ರಂದು ಹೊಸನಗರದಲ್ಲಿ ಇದರ ಸಮಾರೋಪ ಸಮಾರಂಭ ನ.30ರಂದು ಸಾಗರದಲ್ಲಿ ನಡೆಯಲಿದೆ ಎಂದರು.