ಶಿಡ್ಲಘಟ್ಟ ನಗರದಲ್ಲಿ ಸೋಮವಾರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸರ್ ಎಂ ವಿಶ್ವೇಶ್ವರಯ್ಯನವರ ಜಯಂತಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು. ಕನ್ನಡ ಸಾಹಿತ್ಯ ಪರಿಷತ್ ನ ಪದಾಧಿಕಾರಿಗಳು ಪ್ರಪಂಚ ಪ್ರಖ್ಯಾತಿ ಪಡೆದಿರುವ ವಿಶ್ವೇಶ್ವರಯ್ಯನವರ ಸಾಧನೆಗಳು ಎಂದೆಂದಿಗೂ ಅಜರಾಮರ, ಹಾಗೆಯೇ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೊಂದಿಗೆ ವಿಶ್ವೇಶ್ವರಯ್ಯ ಒಡನಾಟದ ಕುರಿತು ಬೆಳಕು ಚೆಲ್ಲಲಾಯಿತು. ಇದೆ ವೇಳೆ ಹಲವು ಗಾಯನ ಕಾರ್ಯಕ್ರಮ ಮತ್ತು ಕಾರ್ಯಕ್ರಮಗಳನ್ನು ಮಾಡಲಾಗಿತ್ತು.