ನರಗುಂದ: ಪಟ್ಟಣದ ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವು
Nargund, Gadag | Mar 18, 2025 ನರಗುಂದ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವನ್ನಪ್ಪಿದ್ದಾನೆ. ಪಟ್ಟಣದ ಶಿವಾನಂದ(20) ಎನ್ನುವ ಯುವಕ ಮೃತ ದುರ್ದೈವಿಯಾಗಿದ್ದಾನೆ. ಬಣ್ಣದ ಒಕುಳಿಯಲ್ಲಿ ಮಿಂದೆದ್ದು ಕೆರೆಗೆ ಹೋದಾಗ ಈ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಯುವಕನ ಶವ ಹೊರ ತಗೆದಿದ್ಡಾರೆ. ಈ ವೇಳೆ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿದ್ದಾರೆ.