ಶಿವಮೊಗ್ಗ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಕಳ್ಳತನ ಪ್ರಕರಣ, ಐವರು ಮಹಿಳೆಯರ ಬಂಧನ
ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ ಬಸ್ ನಲ್ಲಿ ಮಹಿಳೆಯೊಬ್ಬರ ವೆರೈಟಿ ಬ್ಯಾಗ್ ನಲ್ಲಿ ಇದ್ದಂತಹ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇವರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಈವಳೇ 7 ಪ್ರಕರಣಗಳ ಕುರಿತಾಗಿ ಕಳ್ಳತನ ಮಾಡಿದ ಮಹಿಳೆಯರು ಬಾಯ್ಬಿಟ್ಟಿದ್ದಾರೆ. ಜೂ.29 ರಂದು ಕೆಎಸ್ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನವಾಗಿತ್ತು ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು ಈ ಪ್ರಕರಣದ ವಿಚಾರಣೆ ನಡೆಸಿದ ವೇಳೆ ಭದ್ರಾವತಿ ಮೂಲದ ಶಾಂತಿ,ಮೀನಾಕ್ಷಿ,ಸಾವಿತ್ರಿ,ದುರ್ಗಾ,ಸುಶೀಲಮ್ಮ ಎಂಬುವರನ್ನು ಪೊಲೀಸರು ಬಂಧಿಸಿದ್ದು, ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ 8.13 ಲಕ್ಷ 122 ಗ್ರಾಂ ತೂಕದ ಚಿನ್ನಾಭರಣವನ್ನು ವಶಕ್ಕೆ ಭಾನುವಾರ ಪಡೆಯಲಾಗಿದೆ.