ದಾಂಡೇಲಿ : ಶಿರಸಿಯಲ್ಲಿ ಶುಕ್ರವಾರ ಸಂಜೆ ಸಂಪನ್ನಗೊಂಡ ಬೆಳಗಾವಿ ವಿಭಾಗೀಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಾಂಡೇಲಿ ನಗರದ ಜನತಾ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿನಿ ದೃಷ್ಟಿ ನಕುಲ್ ಕಾಮತ್ ಇವಳು ಅತ್ಯುತ್ತಮ ಪ್ರದರ್ಶನವನ್ನು ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈ ಬಗ್ಗೆ ಶುಕ್ರವಾರ ಸಂಜೆ 5:30 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಕಳೆದ ವರ್ಷವೂ ದೃಷ್ಟಿ ನಕುಲ್ ಕಾಮತ್ ಇವಳು ರಾಜ್ಯಮಟ್ಟವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಇವಳು ನಗರದ ಉದ್ಯಮಿ ನಕುಲ್ ಕಾಮತ್ ಮತ್ತು ಶಿಕ್ಷಕಿ ಕವಿತಾ ಕಾಮತ್ ದಂಪತಿಗಳ ಸುಪುತ್ರಿಯಾಗಿದ್ದಾಳೆ.