ಹುನಗುಂದ: ಕೂಡಲಸಂಗಮದಲ್ಲಿ ಚನ್ನಮ್ಮ, ರಾಯಣ್ಣ
ಮೂರ್ತಿಗಳನ್ನು ಅನಾವರಣಗೊಳಿಸಿದ ಮುಖಂಡರು
ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಹಾಗೂ ಹುನಗುಂದ ಇಲಕಲ್ಲ ಉಭಯ ತಾಲೂಕುಗಳ ಆಡಳಿತ ಇವರ ಸಹಯೋಗದೊಂದಿಗೆವೀರಮಾತೆ ಕಿತ್ತೂರು ರಾಣಿ ಚನ್ನಮ್ಮನವರ ೨೪೭ನೇ ಜಯಂತೋತ್ಸವ, ೨೦೧ನೇ ವಿಜಯೋತ್ಸವ ಹಾಗೂ ವೀರರಾಣಿ ಕಿತ್ತೂರ ಚನ್ನಮ್ಮನವರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಉದ್ಘಾಟನಾ ಸಮಾರಂಭ ಅ.೨೯ ಬುಧವಾರ ಮಧ್ಯಾಹ್ನ ೧ ಗಂಟೆಗೆ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ, ಕೊಪ್ಪಳ ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ನ ಪದಾಧಿಕಾರಿಗಳು ಮತ್ತು ಹುನಗುಂದ, ಇಳಕಲ್ ಅವಳಿ ತಾ