ಗದಗ: ಜೂನ್ 3ಕ್ಕೆ ನಗರದಲ್ಲಿ ಕುರುಬರ ಸಹಕಾರ ಪತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮ, ಸಿಎಂ ಸಿದ್ದರಾಮಯ್ಯ ಭಾಗಿ
Gadag, Gadag | May 31, 2025 ನಗರದ ವಿವೇಕಾನಂದ ಸಭಾಗಣದಲ್ಲಿ ದಿ. ಕರ್ನಾಟಕ ಕುರುಬರ ಸಂಘ, ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘ ನಿಯಮಿತದ ಶತಮಾನೋತ್ಸವ ಕಾರ್ಯಕ್ರಮವನ್ನು ಜೂ. 3ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ನಿಯಮಿತದ ಅಧ್ಯಕ್ಷ ವಾಸಪ್ಪ ಕುರಡಗಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಮಾನೋತ್ಸವ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸುವರು. ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಶತಮಾನೋತ್ಸವ ನೆನಪಿನ ಕಾಣೊಕೆ ಬಿಡುಗಡೆಗೊಳಿಸುವರು ಎಂದರು.