ಹೊನ್ನಾವರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಎನ್.ಆರ್.ನಾಯಕ ಪಟ್ಟಣದಲ್ಲಿ ನಿಧನ
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಎನ್.ಆರ್.ನಾಯಕ (90) ಹೊನ್ನಾವರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಸಂಜೆ 3.30ರ ಸುಮಾರು ನಿಧನರಾದರು. ರಾಜ್ಯ ಸರಕಾರ 2003ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಮೂಲತಃ ಅಂಕೋಲಾ ತಾಲೂಕಿನ ಭಾವಿಕೇರಿಯವರಾದ ಎನ್.ಆರ್.ನಾಯಕ, ಕಥೆ, ಸಂಶೋಧನಾ ಪ್ರಬಂಧ, ಜಾನಪದ ಸಂಪಾದನೆ ಹೀಗೆ ಸಾಹಿತ್ಯದ ವಿವಿಧ ಕ್ಷೇತ್ರಗಳಲ್ಲಿ ಕೃಷಿ ಮಾಡಿರುವ ಇವರು ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.