ಶುಕ್ರವಾರ, ಬನಶಂಕರಿ ಪೊಲೀಸರು ರಂಜನ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಮನೆಯ ಎದುರು ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಐದು ವರ್ಷದ ಬಾಲಕ ನೀವ್ ಜೈನ್ಗೆ ಕಾಲಿನಿಂದ ಒದ್ದಿದ್ದಾನೆ ಎಂದು ಆರೋಪಿಸಲಾಗಿದೆ. ತ್ಯಾಗರಾಜನಗರದ ನಿವಾಸಿ ದೀಪಿಕಾ ಜೈನ್ ಅವರು ನೀಡಿದ ದೂರಿನ ಮೇರೆಗೆ ಬಿಎನ್ಎಸ್ ಸೆಕ್ಷನ್ 115(2) ಅಡಿ ಪ್ರಕರಣ ದಾಖಲಿಸಲಾಗಿದೆ. ಭಾನುವಾರ ಮಧ್ಯಾಹ್ನ 1ರ ಸುಮಾರಿಗೆ ತ್ಯಾಗರಾಜನಗರದ ಹಳೇ ಅಂಚೆ ಕಚೇರಿಯ ರಸ್ತೆಯಲ್ಲಿ ಈ ಘಟನೆ ನಡೆದಿದೆ.