ಹನೂರು ತಾಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲು ಜಿಎಸ್ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಬಗ್ಗೆ ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಚಿನ್ನದಾಸೆಗಾಗಿ ಕೆಲ ಕಿಡಿಗೇಡಿಗಳು ಗುಡ್ಡವನ್ನೇ ಅಗೆದಿದ್ದಾರೆಂಬ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದೆ. ದೊಡ್ಡಾಲತ್ತೂರು ಗ್ರಾಮ ಪಂಚಾಯಿತಿಯ ಸರ್ಕಾರಿ ಗುಡ್ಡವನ್ನು ಅಗೆದಿದ್ದು ಭಾನುವಾರ ವಿಚಾರ ಬೆಳಕಿಗೆ ಬಂದಿದೆ. 90 ಸೆಂಟ್ ಗೂ ಅಧಿಕ ವಿಸ್ತೀರ್ಣದ ಗುಡ್ಡಗಳನ್ನು ಚಿನ್ನ ಸಿಗಬಹುದೆಂದು ಅಗೆದಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಯಾತಕ್ಕಾಗಿ ಗುಡ್ಡ ಅಗೆದಿದ್ದಾರೆ, ಗುಡ್ಡ ಅಗೆದವರು ಯಾರೆಂದು ತನಿಖೆ ನಡೆಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.