ದಾಂಡೇಲಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಯಾಗಿ ನೂರು ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಹಿಂದೂ ಸಮಾವೇಶ ಸಮಿತಿ ಟೌನಶಿಪ್ ದಾಂಡೇಲಿ ವತಿಯಿಂದ ನಗರದ ಹಳೆ ನಗರಸಭೆಯ ಮೈದಾನದಲ್ಲಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ಹಿಂದೂ ಸಮಾವೇಶ ಕಾರ್ಯಕ್ರಮವು ಯಶಸ್ವಿಯಾಗಿ ಭಾನುವಾರ ಸಂಜೆ 7:30 ಸುಮಾರಿಗೆ ಸಂಪನ್ನಗೊಂಡಿತು.ಕಾರ್ಯಕ್ರಮದ ಆರಂಭದ ಮುನ್ನ ಹಳೆ ನಗರ ಸಭೆಯ ಮೈದಾನದವರೆಗೆ ಭವ್ಯ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ವಕ್ತಾರರಾಗಿ ಭಾಗವಹಿಸಿ ಮಾತನಾಡಿದ ಆರ್.ಎಸ್.ಎಸ್ ಪ್ರಮುಖ ಗಣಪತಿ ಹಿರೇಸರ ಅವರು ಹಿಂದೂ ಧರ್ಮ ಬಾಂಧವರು ಸಂಘಟಿತರಾಗಿ ನಮ್ಮ ಧರ್ಮ ಸಂರಕ್ಷಣೆಗಾಗಿ ಶ್ರಮಿಸಬೇಕೆಂದರು.