ನಗರ ನೈರ್ಮಲ್ಯಕ್ಕೆ ಆದ್ಯತೆ ನೀಡಿ, ನಗರದ ಸ್ವಚ್ಛತೆ ಮತ್ತು ಸೌಂದರ್ಯ ವೃದ್ಧಿಯನ್ನು ಉದ್ದೇಶವಾಗಿ ತೆಗೆದುಕೊಂಡು, ಶುಕ್ರವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಪ್ರಮುಖ ರಸ್ತೆಗಳು, ಮುಖ್ಯ ರಸ್ತೆಗಳು ಹಾಗೂ ಹೆಚ್ಚಿನ ಜನಸಾಂದ್ರತೆ ಇರುವ ಪ್ರದೇಶಗಳಲ್ಲಿ, ಮಾರುಕಟ್ಟೆ ಸ್ಥಳಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ನಡೆಸಲಾಗಿದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರು ತಿಳಿಸಿದ್ದು, ರೇಸ್ ಕೋರ್ಸ್ ರಸ್ತೆಯಿಂದ ಚಾಲುಕ್ಯ ವೃತ್ತದವರೆಗೆ- 2 ಕಿ.ಮೀ ಹಾಗೂ ಇನ್ಫೆಂಟ್ರಿ ರಸ್ತೆಯಿಂದ ಸಫೀನ ಪ್ಲಾಜ - 2 ಕಿ.ಮೀ ವರೆಗೆ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಗಿದೆ ಎಂದರು