ದೊಡ್ಡಬಳ್ಳಾಪುರ: ವಕೀಲರಿಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನ ಬಂಧಿಸಿ: ನಗರದಲ್ಲಿ ತಾಲ್ಲೂಕು ವಕೀಲರ ಸಂಘ ಆಗ್ರಹ
ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಕೀಲರ ಮೇಲೆ ಹಲ್ಲೆ ಪ್ರಕರಣ. ಆರೋಪಿಯ ಬಂಧನಕ್ಕೆ ವಕೀಲರ ಸಂಘ ಆಗ್ರಹ ದೊಡ್ಡಬಳ್ಳಾಪುರ.ಆ.೫ ರಂದು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಹೊಸಕೋಟೆ ಮೂಲಕದ ವಕೀಲ ಎಸ್.ಪಿ ಮುನಿರಾಜು ಮೇಲೆ ಮೇಲೆ ಜಿಲ್ಲಾಧಿಕಾರಿಗಳ ಮುಂದೆಯೆ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿರುವ ಘಟನೆ ಇಡೀ ವಕೀಲ ಸಮೂಹಕ್ಕೆ ಭೀತಿಯುಂಟು ಮಾಡಿದೆ ಎಂದು ತಾಲ್ಲೂಕು ವಕೀಲರ ಸಂಘದ ಪ್ರಧಾನಕಾರ್ಯದರ್ಶಿ ಕೃಷ್ಣಮೂರ್ತಿ ಹೇಳಿದರು. ನಗರದ ತಾಲ್ಲೂಕು ವಕೀಲರ ಸಂಘದಿಂದ ಕಚೇರಿಯ ಸಭಾ