ಕುರ್ಚಿ ಕಿತ್ತಾಟದಲ್ಲಿ ರಾಜ್ಯದ ಅಭಿವೃದ್ಧಿ ಶೂನ್ಯ : ಬೇತಮಂಗಲ ಗ್ರಾಮದಲ್ಲಿ ವೈ.ಸಂಪಂಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವು ಮುಖ್ಯಮಂತ್ರಿಯ ಕುರ್ಚಿ ಕಿತ್ತಾಟದಲ್ಲಿ ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ ಎಂದು ಕೆಜಿಎಫ್ ಮಾಜಿ ಶಾಸಕ ವೈ ಸಂಪಂಗಿ ಆರೋಪಿಸಿದರು. ಬೇತಮಂಗಲ ಗ್ರಾಮದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷ ಹಾಗೂ ಜೆಡಿಎಸ್ ಪಕ್ಷದ ಮುಖಂಡರಿಂದ ಸೋಮವಾರ ಜಾಥಾ ನಡೆಸಿ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದರು. ರಾಜ್ಯದಲ್ಲಿ ಸುಳ್ಳಿನಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಅಭಿವೃದ್ಧಿಯನ್ನು ಮಾಡದೆ ಎರಡುವರೆ ವರ್ಷ ಪೂರ್ಣಗೊಳಿಸಿದೆ ಈಗ ಪ್ರತಿನಿತ್ಯ ಕುರ್ಚಿಯ ಕಿತ್ತಾಟದಲ್ಲಿ ತೊಡಗಿದ್ದು ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕ