ಕಾಡಾನೆ ದಾಂದಲೆ ನಡೆಸಿ ಬಾಳೆ ತೋಟ ಹಾಗೂ ಭತ್ತದ ಗದ್ದೆಗಳನ್ನು ನಾಶಪಡಿಸಿರುವ ಘಟನೆ ಕಳೆದ ರಾತ್ರಿ ಹೊಸನಗರ ತಾಲೂಕಿನ ಕೆರೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಪಡಿಸಿರುವ ಹಿನ್ನೆಲೆ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕೆರೆಹಳ್ಳಿ ಗ್ರಾಮದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ ಗದ್ದೆಗಳು ಕೂಡ ಹಾನಿಗೊಳಿಸಿದೆ. ಕೆರೆಹಳ್ಳಿಯ ನಾಗರದೇವರ ಗುಡಿ ಹತ್ತಿರ ಲದ್ದಿ ಹಾಕಿಕೊಂಡು ಆನೆ ತೋಟದ ಪ್ರದೇಶಕ್ಕೆ ಪ್ರವೇಶಿಸಿ, ಟೀಕಪ್ಪ ಗೌಡರ ತೋಟ ಹಾನಿಗೊಳಿಸಿವೆ.