ಆದುನಿಕ ಜಗತ್ತಿನಲ್ಲಿ ವೈಜ್ಞಾನಿಕ ಶಿಕ್ಷಣವು ಸಮಾಜ ಮತ್ತು ದೇಶದ ಪ್ರಗತಿಗೆ ಅಗತ್ಯವಾಗಿದೆ. ವಿಜ್ಞಾನವು ಜೀವನದ ಒಂದು ಭಾಗವಾಗಿರುವುದರಿಂದ ಶಾಲಾ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅರಿವು, ಕೌಶಲ್ಯಗಳನ್ನು ಕಲಿಸುವುದು ನಮ್ಮ ಇಲಾಖೆಯ ಉದ್ದೇಶವಾಗಿದೆ. ರಾಯಚೂರಿನಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣ ನನ್ನ ಕನಸಾಗಿತ್ತು, ಇಂದು ನನಸಾಗಿದೆ ಎಂದು ಶನಿವಾರ 12 ಗಂಟೆಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಚಿವಾರಾದ ಎನ್ಎಸ್ ಬೋಸರಾಜು ಅವರು ತಿಳಿಸಿದರು.