ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿ, ನಾನು ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷೆ ಅದಕ್ಕಾಗಿ ಸಿಎಂ ಭೇಟಿ ಮಾಡಿದ್ದೇನೆ. ಸಿಎಂ ನೋಡೋಣ ಕಾಲ ಬಂದಾಗ ಮಾಡೋಣ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಾನು ನಮ್ಮ ತಂದೆ ತಾಯಿ ಭದ್ರ ಬುನಾದಿ ಯಾಗಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದೇವೆ. ಅದಕ್ಕಾಗಿ ನಮ್ಮನ್ನು ಪರಿಗಣಿಸಿ ಎಂದು ಕೇಳಿದ್ದೇವೆ. ಮಂತ್ರಿ ಸ್ಥಾನ ಸಿಗುವ ವಿಶ್ವಾಸ ನನಗೆ ಇದೆ ಎಂದರು.