ವಿಧಾನಸೌಧದ ಆವರಣದಲ್ಲಿ ಗುರುವಾರ ಸಂಜೆ 6 ಗಂಟೆಗೆ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಬಡವರ ಬದುಕಿಗಾಗಿ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ಜಮೀನು, ನಿವೇಶನ, ಪಿಂಚಣಿ, ಮಕ್ಕಳಿಗೆ ಬಿಸಿಯೂಟ ಸೇರಿದಂತೆ ಅನೇಕ ಕಾರ್ಯಕ್ರಮ ಕೊಟ್ಟಿದೆ. ಅದೇ ರೀತಿ ನಾವು ಗ್ಯಾರಂಟಿ ಯೋಜನೆ ನೀಡಿದ್ದೇವೆ ಎಂದರು.