ಹುಬ್ಬಳ್ಳಿ: ದೆಹಲಿ ಕೆಂಪುಕೋಟೆ ಬಳಿ ಭೀಕರ ಸ್ಪೋಟ ಪ್ರಕರಣ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿಯ ರೈಲ್ಚೆ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತಾಲಯ ಹಾಗೂ ಆರ್ ಪಿಎಫ್ ನಿಂದ ರೈಲ್ವೆ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಶ್ವಾನದಳ ಮತ್ತು ಮೆಟಲ್ ಡಿಟೆಕ್ಟರ್ ಮೂಲಕ ಪ್ರಯಾಣಿಕರ ಲಗೇಜ್ ಇತ್ಯಾದಿ ತಪಾಸಣೆ ಮಾಡಲಾಗುತ್ತಿದೆ. ಅಲ್ಲದೆ ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಮೇಲೆ ಕೂಡ ಪೊಲೀಸರು ನಿಗಾ ವಹಿಸಿದ್ದಾರೆ..