ಶಿರಸಿ: ಮಾಡನಕೇರಿಯಲ್ಲಿ ಮರ ಬಿದ್ದು ಮನೆ ಸಂಪೂರ್ಣ ಜಖಂ : ಬಿಜೆಪಿ ನಿಯೋಗ ಭೇಟಿ
ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯಲ್ಲಿನ ಮಾಡನಕೇರಿಯ ಕೃಷ್ಣ ಮಡಿವಾಳ ಎಂಬುವವರ ಮನೆಮೇಲೆ ಜೂನ್ 24ರಂದು ಮರಬಿದ್ದು ಮನೆಯು ಸಂಪೂರ್ಣ ನಾಶವಾಗಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ಸ್ಥಳಕ್ಕೆ ಶನಿವಾರ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿ, ಧನಸಹಾಯ ಮಾಡಿದರು. ಈ ವೇಳೆ ಮಾತನಾಡಿದ ಅವರು, ಮನೆ ಬಿದ್ದು 20 ದಿನಗಳಾದರೂ ಸಹ ಇದುವರೆಗೂ ಸರಕಾರದಿಂದ ಪರಿಹಾರ ದೊರೆತಿಲ್ಲ. ಜೊತೆಗೆ ಸ್ಥಳಕ್ಕೆ ತಹಶೀಲ್ದಾರ್, ಶಾಸಕರು ಯಾರೂ ಇದುವರೆಗೂ ಭೇಟಿ ನೀಡಿಲ್ಲ. ಈ ಕೂಡಲೇ ಸಂಬಂಧಪಟ್ಟ ಇಲಾಖೆ ಮತ್ತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಪರಿಹಾರ ನೀಡುವ ಮೂಲಕ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದರು.