ನರಸಿಂಹರಾಜಪುರ: ಮಾಗುಂಡಿಯ ಈದ್ ಮಿಲಾದ್ ಮೆರವಣಿಗೆಯಲ್ಲಿ ಸಾಮರಸ್ಯ ಸಂದೇಶ.!
ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾಗುಂಡಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಮುಸ್ಲಿಮರಿಗೆ ಹಣ್ಣು ಜ್ಯೂಸ್ ಇನ್ನಿತರೆ ವಸ್ತುಗಳನ್ನು ವಿತರಣೆ ಮಾಡಲಾಯಿತು. ಜುಮ್ಮಾ ಮಸೀದಿಯ ವತಿಯಿಂದ ಹಮ್ಮಿಕೊಂಡಿದ್ದ ಈ ಒಂದು ಈದ್ ಮಿಲಾದ್ ಮೆರವಣಿಗೆಯಲ್ಲಿ 500 ರಿಂದ 600ಕ್ಕೂ ಅಧಿಕ ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು.