ಧಾರವಾಡದ ಜೆ.ಎಸ್.ಎಸ್ ಸಂಸ್ಥೆಯ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ, ರ್ಯಾಪಿಡ್ ಸಂಸ್ಥೆ ಮತ್ತು ಮೂರ್ತಿ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜೆ.ಎಸ್.ಎಸ್ ಆವರಣದಲ್ಲಿ ಮಹಿಳೆಯರ ಉದ್ಯೋಗ ಮೇಳವನ್ನು ಆಯೋಜಿಸಲಾಗಿತ್ತು. ಜೆ.ಎಸ್.ಎಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ್ ಪ್ರಸಾದ್ ಅವರು ಮೇಳವನ್ನು ಉದ್ಘಾಟಿಸಿದರು. ಈ ಮೇಳದಲ್ಲಿ ಸುಮಾರು 35 ಕಂಪನಿಗಳು ಭಾಗವಹಿಸಿದ್ದವು.