ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,"ವಿಬಿಜಿ, ರಾಮ್ ಜಿ" ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಅವರು ವಿಧಾನಸೌಧದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ತಿಳಿಸಿದರು. ಜನರ ನ್ಯಾಯಾಲಯಕ್ಕೂ ವಿಬಿಜಿ, ರಾಮ್ ಜಿ" ಯೋಜನೆಯ ತೆಗೆದುಕೊಂಡು ಹೋಗಲು ನಿರ್ಣಯಿಸಲಾಗಿದೆ ಎಂದ ಅವರು ಸಂವಿಧಾನದ 73 ನೇ ತಿದ್ದುಪಡಿಯಾದ ನಂತರ ದೇಶದಲ್ಲಿ ವಿಕೇಂದ್ರೀಕರಣವಾಗಿದೆ. ಈ ಯೋಜನೆಯಿಂದ ವಿಕೇಂದ್ರೀಕರಣಕ್ಕೆ ಕೊಡಲಿ ಏಟು ಬಿದ್ದಿದೆ.