ಮಳವಳ್ಳಿ : ಪಟ್ಟಣದ ಸುಲ್ತಾನ್ ರಸ್ತೆಯಲ್ಲಿರುವ ಎಸ್ ಎಲ್ ವಿ ಎಲೆಕ್ಟ್ರಿಕಲ್ ಮತ್ತು ಹಾರ್ಡ್ವೇರ್ ಅಂಗಡಿಗೆ ಶುಕ್ರವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಇಡೀ ಅಂಗಡಿ ಮಳಿಗೆ ಸುಟ್ಟು ಕರ್ಕಲಾಗಿರುವ ಘಟನೆ ಸ್ಥಳಕ್ಕೆ ಶನಿವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಶಾಸಕರಾದ ಪಿ ಎಂ ನರೇಂದ್ರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಬೆಂಕಿ ಅವಘಡ ಕುರಿತು ಅಂಗಡಿ ಮಾಲೀಕರು ಹಾಗೂ ಮುಖಂಡ ರಿಂದ ಮಾಹಿತಿ ಪಡೆದುಕೊಂಡರು. ಈ ವೇಳೆ ಅಕಸ್ಮಿಕ ಬೆಂಕಿ ಅನಾಹು ತದಿಂದ ಭಾರಿ ನಷ್ಟಕ್ಕೆ ಒಳಗಾಗಿ ರುವ ಅಂಗಡಿ ಮಾಲೀಕರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಿಕೊಡುವಂತೆ ಮುಖಂಡರು ಶಾಸಕರಲ್ಲಿ ಮನವಿ ಮಾಡಿದರು.