ಕೆಟಿಎಂ ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ದ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ನಾಗರಬಾವಿಯ ಮುಖ್ಯರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಮಂಗನಹಳ್ಳಿಯ ಮಧು ಅವರು ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಕೆಟಿಎಂ ಬೈಕ್ ಸವಾರ ಶ್ರೀನಿವಾಸ್ ಎಂಬಾತನಿಂದ ಅಪಘಾತ ಸಂಭವಿಸಿದ್ದು, ರಸ್ತೆ ದಾಟುವಾಗ ಕೆಟಿಎಂ ಬೈಕ್ ಡಿಕ್ಕಿಯಾಗಿತ್ತು, ಅಪಘಾತದಿಂದ ಮಧು ಅವರ ತಲೆಗೆ ತೀವ್ರ ಪೆಟ್ಟಾಗಿತ್ತು. ಬಳಿಕ ಆಸ್ಪತ್ರೆಗೆ ದಾಖಲಿಸಿದರು ಇಂದು ಚಿಕಿತ್ಸೆ ಫಲಿಸದೆ ಮಧು ಮೃತಪಟ್ಟಿದ್ದು, ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ, ಸದ್ಯ ಆರೋಪಿ ಶ್ರೀನಿವಾಸ್ ನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.