ಮಂಗಳೂರು: ನಗರದಲ್ಲಿ ಏಪ್ರಿಲ್ 14ರ ಮೋದಿ ಸಮಾವೇಶ ರದ್ದು - ರೋಡ್ ಶೋ ಮಾತ್ರ
ಮಂಗಳೂರು: ನಗರದ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಎಪ್ರಿಲ್ 14ರಂದು ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿಯವರ ಸಮಾವೇಶ ಕೊನೆಯ ಕ್ಷಣದಲ್ಲಿ ರದ್ದಾಗಿದ್ದು, ಸಮಾವೇಶದ ಬದಲು ಬರೀ ರೋಡ್ ಶೋ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ. ಸಮಾವೇಶಕ್ಕೆ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಇಂದು ಚಪ್ಪರ ಮುಹೂರ್ತವೂ ನಡೆದಿತ್ತು. ಜರ್ಮನ್ ಪೆಂಡಾಲ್ ಹಾಕಲು ಸಿದ್ಧತೆಯೂ ನಡೆದಿತ್ತು. ಆದರೆ ಕೆಲವೊಂದು ಕಾರಣಗಳಿಂದ ಸಮಾವೇಶ ರದ್ದುಗೊಂಡಿದೆ ಎಂದು ತಿಳಿದುಬಂದಿದೆ. ಇದೀಗ ಸಮಾವೇಶದ ಬದಲು ರೋಡ್ ಶೋ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಎಪ್ರಿಲ್ 14ರಂದು ಸಂಜೆ ವೇಳೆಗೆ ಮೋದಿ ರೋಡ್ ಶೋ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಇನ್ನಷ್ಟೇ ರೋಡ್ ಶೋ ರೂಟ್ ಮ್ಯಾಪ್ ಸಿದ್ಧಪಡಿಸಬೇಕಿದೆ.