ಹುಬ್ಬಳ್ಳಿ: ನಗರದ ರಾಣಿ ಚೆನ್ನಮ್ಮ ವೃತ್ತದ ಬಳಿ ಇರುವ ಸಾಯಿ ಲಾಡ್ಜ್ ಎದುರು ನಿಲ್ಲಿಸಿದ್ದ ಬೈಕ್ನ್ನು ಖದೀಮನೊಬ್ಬ ಹಾಡುಹಗಲೇ ಕದ್ದೊಯ್ದ ಘಟನೆ ನಗರದ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೈಕ್ ಮಾಲೀಕ ಸಾಯಿ ಲಾಡ್ಜ್ ಪಕ್ಕದ ಅಂಗಡಿ ಹೋಗಿ ಬರುವಷ್ಟರಲ್ಲೇ, ದೀಪಾಲಿ ಹೋಟೆಲ್ ನಿಂದ ಹೊರ ಬಂದ ಆರೋಪಿ ಬೈಕ್ನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಕಳ್ಳತನದ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯ ಬಳಿಕ ಬೈಕ್ ಮಾಲೀಕ ಉಪನಗರ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾನೆ. ಸದ್ಯ ಉಪನಗರ ಠಾಣೆಯ ಪೊಲೀಸರು ಸಿಸಿಟಿವಿ ಆಧರಿಸಿ ಕಳ್ಳನ ಪತ್ತೆಗೆ ಶೋಧ ಆರಂಭಿಸಿದ್ದಾರೆ.