ತೀರ್ಥಹಳ್ಳಿ: ಈಶ್ವರಪ್ಪನವರ ಸ್ಪರ್ಧೆ ನಾಮಕವಸ್ಥೆ ಅಷ್ಟೇ ಪಟ್ಟಣದ ಪತ್ರಿಕಾ ಭವನದಲ್ಲಿ ಶಾಸಕ ಆರಗ ಜ್ಞಾನೇಂದ್ರ ಹೇಳಿಕೆ
ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯಲ್ಲಿ ಜನರ ಪ್ರೀತಿ ವಿಶ್ವಾಸ ತೆಗೆದ್ಕೊಂಡಿರುವ ಬಿ ವೈ ರಾಘವೇಂದ್ರ ಈ ಬಾರಿ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಪತ್ರಿಕಾಭವನದಲ್ಲಿ ಸೋಮವಾರ ಮಾಶ್ಯಹ್ನ 1 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಬಾರಿ ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಅಭಿವೃದ್ಧಿಯ ಮಹಾಪೂರವನ್ನೇ ಹರಿಸಿದ್ದಾರೆ. ಅಭಿವೃದ್ಧಿಗೆ ಮತ ಹಾಕುವ ಪ್ರತಿಯೊಬ್ಬರೂ ಅವರಿಗೆ ಮತ ಹಾಕುತ್ತಾರೆ ಎನ್ನುವ ನಂಬಿಕೆ ಇದೆ ಎಂದರು. ಈಶ್ವರಪ್ಪನವರ ಸ್ಪರ್ಧೆ ನಾಮಕವಸ್ಥೆ ಅಷ್ಟೇ ಅವರು ಚುನಾವಣೆಗೆ ನಿಲ್ಲುವುದಿಲ್ಲ ಎಂಬ ನಂಬಿಕೆ ಇದೆ. ಕಾಂತೇಶ್ ಟಿಕೇಟ್ ನೀಡಿಲ್ಲ ಎಂದು ಚುನಾವಣೆ ನಿಲ್ಲುತ್ತಿದ್ದಾರೆ ಅವರು ಹಿಂದುತ್ವದ ನಾಯಕರು ಪಕ್ಷ ಕಡೆಗಣಿಸಿಲ್ಲ ಎಂದರು.