ಮೊಳಕಾಲ್ಮುರು:-ಶಾಲಾ ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸಲು ಹಾಗೂ ಮಕ್ಕಳನ್ನು ಕಲಿಯತ್ತ ಕರೆತರಲು ಈ ಕಲಿಕಾ ಹಬ್ಬವು ಹೆಚ್ಚು ಸಹಕಾರಿಯಾಗಿದೆ ಎಂದು ಗ್ರಾಪಂ ಅಧ್ಯಕ್ಷೆ ನಾಗವೇಣಿ ತಿಳಿಸಿದರು. ತಾಲೂಕಿನ ರಾಂಪುರ ಶ್ರೀ ಗಡ್ಡೆ ವೀರಭದ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಇಲಾಖೆ, ಜಿಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಗಳ ಆಶ್ರಯದಲ್ಲಿ ಏರ್ಪಡಿಸಿದ್ದ ರಾಂಪುರ ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಕಲಿಕಾ ಹಬ್ಬದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.