ಸಿಂಧನೂರು: ಏಕಾಏಕಿ ಮನೆಗಳಲ್ಲಿ ನೆಲ ಕುಸಿತ: ಬಸಿ ನೀರಿನ ಸಮಸ್ಯೆ ಆತಂಕದಲ್ಲಿ ಯದ್ದಲದಿನ್ನಿ ಗ್ರಾಮಸ್ಥರು
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಯದ್ದಲದೊಡ್ಡಿ ಗ್ರಾಮದ ಮನೆಗಳಲ್ಲಿ ಏಕಾಏಕಿ ಭೂಮಿ ಕುಸಿದಿದ್ದು ಮನೆಯಲ್ಲೇ ಗುಂಡಿಗಳು ನಿರ್ಮಾಣವಾಗಿವೆ. ಗ್ರಾಮದಲ್ಲಿ ಕಳೆದ ಒಂದು ತಿಂಗಳಲ್ಲಿ ಐದು ಮನೆಗಳಲ್ಲಿ ಭೂ ಕುಸಿತವಾಗಿದ್ದು ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಗ್ರಾಮ ತಗ್ಗು ಪ್ರದೇಶದಲ್ಲಿದ್ದು ಗ್ರಾಮದ ಸುತ್ತಲು ನೀರಾವರಿ ಪ್ರದೇಶ ಇರುವುದರಿಂದ ನೀರಿನ ಬಸಿ ಉಂಟಾಗಿ ಭೂಮಿ ಕುಸಿಯುತ್ತಿದೆ ಅಂತ ಗ್ರಾಮಸ್ಥರು ತಿಳಿಸಿದ್ದಾರೆ. ಗ್ರಾಮದ ರಾಜಶೇಖರ ರೆಡ್ಡಿ, ಗುರಪ್ಪ ಮೂಡಲಗಿರಿ, ಡಾ.ಕರಿಬಸಪ್ಪ,ರಮೇಶ, ಚನ್ನಬಸವ ಎನ್ನುವವರ ಮನೆಗಳಲ್ಲಿ ಭೂ ಕುಸಿತವಾಗಿದೆ. ಅದೃಷ್ಟವಶಾತ್ ಭೂ ಕುಸಿತ ವೇಳೆ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.