ಚಿತ್ತರಗಿ ವಿಜಯಮಹಾಂತ ಶಿವಯೋಗಿಗಳ 114ನೇ ಸಂಸ್ಮರಣೋತ್ಸವ, ಶರಣ ಸಂಸ್ಕೃತಿ ಮಹೋತ್ಸವ ಹಾಗೂ ವಿಶ್ವ ಬಸವಧರ್ಮ ಸಮಾವೇಶದ ಸಮಾರೋಪದ ಪ್ರಯುಕ್ತ ಪಟ್ಟಣದಲ್ಲಿ ಭಾನುವಾರ ವಚನ ಗ್ರಂಥಗಳ ಕಟ್ಟಿನ ಅಡ್ಡಪಲ್ಲಕ್ಕಿ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಪಟ್ಟಣದ ವಿಜಯ ಮಹಾಂತೇಶ್ವರ ಶಾಖಾ ಅನುಭವ ಮಂಪಟದಿಂದ ಆರಂಭವಾದ ವಚನ ಗ್ರಂಥ ತಾಡೋಲೆ ಕಟ್ಟಿನ, ವಿಶ್ವಗುರು ಬಸವಣ್ಣ, ಮಹಾಂತ ಶಿವಯೋಗಿಗಳ ಭಾವಚಿತ್ರ ಇರುವ ಅಡ್ಡಪಲ್ಲಕ್ಕಿ ಉತ್ಸವ ಪಟ್ಟಣದ ಬಸವಸಾಗರ ವೃತ್ತ, ಬಸ್ ನಿಲ್ದಾಣ ವೃತ್ತ, ಗಡಿಯಾರ ವೃತ್ತ ಸೇರಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.