ಕಂಪ್ಯೂಟರ್ ಸಾಕ್ಷರತೆ ಇಂದಿನ ಅಗತ್ಯ : ಪಿ.ಡಿ.ಓ ನಾಗರಾಜ್ ಇಂದಿನ ಸಮಾಜದಲ್ಲಿ ಪ್ರತಿಯೊಬ್ಬರು ಕಂಪ್ಯೂಟರ್ ಶಿಕ್ಷಣ ಪಡೆಯಬೇಕು, ಕಂಪ್ಯೂಟರ್ ತಂತ್ರಜ್ಞಾನದ ಬಗ್ಗೆ ಡಿಜಿಟಲ್ ಸಾಕ್ಷರತೆಯ ಮಾನವನ್ನು ಪಡೆಯುವ ಮೂಲಕ ದೇಶದ ದೇಶವನ್ನು ಪ್ರಗತಿಪಥದತ್ತ ಕೊಂಡೊಯ್ಯುವಂತೆ ಹರಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್.ನಾಗರಾಜ್ ತಿಳಿಸಿದರು . ಹರಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕ ಗ್ರಂಥಾಲಯದಲ್ಲಿ ಮಂಗಳವಾರ ಮಧ್ಯಾಹ್ನ 1 ಗಂಟೆಯಲ್ಲಿ ಏರ್ಪಡಿಸಿದ್ದ ವಿಶ್ವ ಕಂಪ್ಯೂಟರ್ ಸಾಕ್ಷರತಾ ದಿನ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಶಿಕ್ಷಣ ಅಥವಾ ಕಂಪ್ಯೂಟರ್ ಶಿಕ್ಷಣ ಯಾರೋ ಒಬ್ಬರ ಸ್ವ