ವಿಧಾನಸೌಧದಲ್ಲಿ ಶುಕ್ರವಾರ ಮಧ್ಯಾಹ್ನ 1:30 ರ ಸುಮಾರಿಗೆ ಒಳ ಮೀಸಲಾತಿ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಅಲೆಮಾರಿಗಳ ಮಹಾ ಒಕ್ಕೂಟದ ಸಭೆ ಮಾಡಿದ್ದೇವೆ. ನಾಗಮೋಹನ್ ದಾಸ್ ಅವರು ನಮಗೆ 1% ಕೊಟ್ಟಿದ್ದರು. ಆದರೆ ನಮಗೆ ಸಿ ಗ್ರೂಪ್ ಗೆ ಸೇರಿಸಿದ್ದೀರಾ, ನಮಗೆ ಪ್ರತ್ಯೇಕ 1% ಕೊಡಬೇಕು ಅಂತ ಒತ್ತಾಯ ಮಾಡಿದ್ದಾರೆ. ಅಭಿವೃದ್ಧಿ ನಿಗಮ ಮಾಡಲು ಕೇಳಿದ್ದಾರೆ. ಆರ್ಥಿಕ ಪ್ಯಾಕೇಜ್ ಕೊಡಬೇಕು ಅಂತ ಮನವಿ ಮಾಡಿದ್ರು. ನಾವು ಸಾಮಾಜಿಕ ನ್ಯಾಯದ ಪರ ಇರೋದು. 1% ಕೊಡೋ ಬಗ್ಗೆ ಕಾನೂನು ತಜ್ಞರ ಜೊತೆ ಸಭೆ ಮಾಡಿ ತೀರ್ಮಾನ ಮಾಡ್ತೀವಿ ಎಂದರು.