ಹುಬ್ಬಳ್ಳಿ: ಇಲ್ಲಿನ ಸಿದ್ದೇಶ್ವರ ಪಾರ್ಕ್ ಬಳಿ ಸಂಶಯಾಸ್ಪದವಾಗಿ ನಿಂತುಕೊAಡು ಯಾವುದೋ ಕೃತ್ಯಕ್ಕೆ ಮುಂದಾಗಿದ್ದ ಇಬ್ಬರನ್ನು ವಿದ್ಯಾನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಓಂ ಸುಭಾಸ್, ಶ್ರೀಮಂತ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದೇಶ್ವರ ಪಾರ್ಕ್ ಹತ್ತಿರ ಕವಿನೆರಳಿನಲ್ಲಿ ನಿಂತುಕೊAಡು ಯಾವುದೋ ಕೃತ್ಯಕ್ಕೆ ಯತ್ನ ಮಾಡುತ್ತಿದ್ದಾಗ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಸಮರ್ಪಕ ಉತ್ತರ ನೀಡದ ಕಾರಣ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ