ಕಾಡುಹಂದಿ ಅಡ್ಡಲಾಗಿ ಬಂದು ಬೈಕ್ ನಿಂದ ಬಿದ್ದು ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಗಡವಂತಿ ಹೊರ ವಲಯದ ರಸ್ತೆ ತಿರುವಿನಲ್ಲಿ ಶುಕ್ರವಾರ ರಾತ್ರಿ 10:30ಕ್ಕೆ ಸಂಭವಿಸಿದೆ. ಅಪಘಾತಲ್ಲಿ ಗಾಯಗೊಂಡ ವ್ಯಕ್ತಿಯನ್ನು ಬಸವಕಲ್ಯಾಣ ತಾಲೂಕು ರಾಜೇಶ್ವರ ಗ್ರಾಮದ ನಿವಾಸಿ ಶಾಹೀದ್ ಮೊಯಿನ್ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಹುಮ್ನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೀದರಗೆ ಕಳಿಸಲಾಗಿದೆ.