ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಳವಾಗಿದೆ. ಸೊರಬ ತಾಲೂಕಿನ ಉಳವಿ ಹೋಬಳಿಯ ಕಾನಹಳ್ಳಿ,ಮೈಸಾವಿ, ಕಣ್ಣೂರು ಕೈಸೋಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರ ಜಮೀನುಗಳಲ್ಲಿ ಎರಡು ಕಾಡಾನೆಗಳು ಉಪಟಳ ಮಾಡುತ್ತಿವೆ. ರೈತರ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳನ್ನ ನಾಶ ಮಾಡುತ್ತಿವೆ. ಇದರಿಂದ ಗ್ರಾಮಸ್ಥರುಗಳು ಆತಂಕಕ್ಕೆ ಒಳಗಾಗಿದ್ದಾರೆ ಈ ಕುರಿತಾದ ಮಾಹಿತಿಯು ಬುಧವಾರ ಲಭ್ಯವಾಗಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳನ್ನು ಕಾಡಿಗೆ ಅಟ್ಟುವ ಪ್ರಯತ್ನ ಮಾಡುತ್ತಿದ್ದಾರೆ.