ತುಂಗಭದ್ರಾ ನೀರಾವರಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಉದ್ಯೋಗದ ಭದ್ರತೆ ನೀಡಬೇಕು ಹಾಗೂ ಸರ್ಕಾರದ ನಿರ್ದೇಶನದಂತೆ ವರ್ಷಪೂರ್ತಿ ಕೆಲಸ ನೀಡಬೇಕು ಎಂಬ ಮುಖ್ಯ ಬೇಡಿಕೆಯೊಂದಿಗೆ ಇಂದು ಮಾನ್ವಿ ಉಪ ವಿಭಾಗದ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘ ವತಿಯಿಂದ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಬುಧವಾರ 11 ಗಂಟೆಗೆ ಮನವಿ ಸಲ್ಲಿಸಲಾಯಿತು.