ಮಕ್ಕಳ ಅಕಾಡೆಮಿ ಕ್ರಿಯಾಶೀಲವಾಗಿ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು. ನಗರದ ಮಕ್ಕಳ ಅಕಾಡೆಮಿಯ ರಜತ ಮಹೋತ್ಸವದ ನಿಮಿತ್ತ ಆಲೂರ ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲದೀಪ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರಕಾರ ಮಾಡಬೇಕಾದ ಕೆಲಸವನ್ನು ಮಕ್ಕಳ ಅಕಾಡೆಮಿ ಮಾಡುತ್ತಿದೆ. ಮಕ್ಕಳ ಶ್ರೇಯಸ್ಸಿಗಾಗ