ಸಿದ್ಧಾಪುರ: ಶಿರಳಗಿಯಲ್ಲಿ ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ಹಾನಿ
ಸಿದ್ದಾಪುರ : ತಾಲ್ಲೂಕಿನ ಶಿರಳಗಿಯಲ್ಲಿ ಹುಲ್ಲಿನ ಬಣವೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕ ಬೆಂಕಿ ತಗುಲಿ ಸುಮಾರು 600 ಕ್ಕೂ ಹೆಚ್ಚಿನ ಹುಲ್ಲಿನ ಸೂಡುಗಳು ಹಾಗೂ ಒಂದು ತೆಂಗಿನ ಮರ ಬೆಂಕಿ ಕೆನ್ನಾಲಿಗೆಗೆ ತುತ್ತಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದ್ದು, ಈ ಬಗ್ಗೆ ಇಂದು ಭಾನುವಾರ ಬೆಳಿಗ್ಗೆ 6:00 ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಸುದ್ದಿ ತಿಳಿದ ಸಿದ್ದಾಪುರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ ಸೊರಬ ಅಗ್ನಿ ಶಾಮಕ ದಳದವರ ಸಹಾಯ ಪಡೆದು ಬೆಂಕಿ ನಂದಿಸಿ ಮುಂದಾಗಬಹುದಾದ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಘಟನೆಯಿಂದ ಸುಮಾರು ರೂ. 1,50,000/- ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಗಣಪತಿ ಮೈಲಾ ನಾಯ್ಕ ಎಂಬವರಿಗೆ ಸೇರಿದ ಹುಲ್ಲಿನ ಬಣವೆಯಾಗಿದೆ.