ಗೌರಿಬಿದನೂರು: ಚಿಕ್ಕಹೊಸಹಳ್ಳಿಯಲ್ಲಿ ಜೂಜಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಗೌರಿಬಿದನೂರು ತಾಲೂಕಿನಿಂದ ಬೇರ್ಪಟ್ಟ ನೂತನ ಮಂಚೇನಹಳ್ಳಿ ತಾಲೂಕು ಕೇಂದ್ರದ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು, ಠಾಣಾ ವ್ಯಾಪ್ತಿಯ ಚಿಕ್ಕ ಹೊಸಹಳ್ಳಿ ಗ್ರಾಮದ ಹೊರ ವಲಯದ ಜಮೀನಿನ ಬಳಿ ಅಕ್ರಮವಾಗಿ ಇಸ್ಪೀಟು ಜೂಜಾಟವಾಡುತ್ತಿದ್ದ ಗುಂಪಿನ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಆರೋಪಿಗಳನ್ನು ಬಂಧಿಸಿ, ಜೂಜಾಟಕ್ಕೆ ಪಣ ಇಟ್ಟಿದ್ದ ₹2860ರೂ. ಹಣವನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಲಾಗಿದೆ.