ದಾಂಡೇಲಿ : ಹುಬ್ಬಳ್ಳಿಯಲ್ಲಿ ಜ.7ರಂದು ಬಿಜೆಪಿ ಕಾರ್ಯಕರ್ತೆಯಾಗಿರುವ ಸುಜಾತ ಹಂಡಿಯವರ ಮೇಲೆ ಪೊಲೀಸರಿಂದ ನಡೆದ ದೌರ್ಜನ್ಯವನ್ನು ನಗರದ ಬಿಜೆಪಿ ಮಹಿಳಾ ಮೋರ್ಚಾವು ಖಂಡಿಸಿ, ಈ ಬಗ್ಗೆ ರಾಜ್ಯಪಾಲರಿಗೆ ಬರೆದ ಮನವಿಯನ್ನು ಅಂಬೇವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಅವರ ಅನುಪಸ್ಥಿತಿಯಲ್ಲಿ ಆಹಾರ ನಿರೀಕ್ಷಕರಾದ ಗೋಪಿ ಚೌಹ್ವಾಣ್ ಅವರ ಮೂಲಕ ಇಂದು ಸೋಮವಾರ ಮಧ್ಯಾಹ್ನ 12:30 ಗಂಟೆ ಸುಮಾರಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಹಿಳಾ ಪ್ರಮುಖರಾದ ಶಾರದಾ ಪರಶುರಾಮ ಅವರು ಪೊಲೀಸರು ಕಾನೂನನ್ನು ಮೀರಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿರುವುದು ನ್ಯಾಯ ಸಮ್ಮತವಲ್ಲ ಇದೊಂದು ರಾಜಕೀಯ ಪಿತೂರಿಯಾಗಿದೆ ಎಂದರು.