ವಿಧಾನಸೌಧದಲ್ಲಿ ಇಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಸದನದಲ್ಲಿ ರಾಜ್ಯಪಾಲರ ಉಪಸ್ಥಿತಿಯಲ್ಲಿ ನಡೆದ ಗೂಂಡಾಗಿರಿ ಪ್ರದರ್ಶನದ ಹೊಣೆ ಹೊತ್ತು ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಅವರು ಹೇಳಿದ್ದಾರೆ. ಗೌರವಾನ್ವಿತ ರಾಜ್ಯಪಾಲರು ಭಾಷಣ ಓದುವ ಸಂದರ್ಭದಲ್ಲಿ ಕೆಲವು ಸದಸ್ಯರು ಅವರ ಮೇಲೆ ಹಲ್ಲೆ ನಡೆಸುವ ಹಂತಕ್ಕೆ ಬಂದಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕಾಂಗ್ರೆಸ್ನ ಗೂಂಡಾಗಿರಿ ರಸ್ತೆಗಳಿಂದ ಸದನದವರೆಗೂ ವ್ಯಾಪಿಸಿದೆ ಎಂದು ಅವರು ಖಂಡಿಸಿದ್ದಾರೆ.