ನಾಯಿವೊಂದು ಅಡ್ಡ ಬಂದಿದ್ದನ್ನ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯವಾಗಿರುವ ಘಟನೆ ಭದ್ರಾವತಿ ತಾಲೂಕಿನ ಕೈಮರ ಬಳಿ ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆದಿದೆ. ಶಬರಿಮಲೆ ಯಿಂದ ವಾಪಸ್ಸು ಶಿವಮೊಗ್ಗಕ್ಕೆ ತೆರಳುವ ವೇಳೆ ಅಪಘಾತ ವಾಗಿದೆ. ಅಪಘಾತದಲ್ಲಿ ಗಾಯ ಗೊಂಡವವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ. ನರಸಿಂಹ, ಪ್ರಮೋದ್ ಎಂಬುವರಿಗೆ ಗಾಯವಾಗಿದೆ. ಸ್ಥಳಕ್ಕೆ ಹೊಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.