ಭಾರತೀಯ ಜನತಾ ಪಾರ್ಟಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ 49 ರಲ್ಲಿ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಿ ಪ್ರಕ್ರಿಯೆಯ ಕುರಿತು ಪ್ರಮುಖರು ಮತ್ತು ಕಾರ್ಯಕರ್ತರನ್ನುದ್ದೇಶಿಸಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷರಾದ ರಾಜು ಕಾಳೆ, ಪಾಲಿಕೆಯ ಸದಸ್ಯರಾದ ಶ್ರೀಮತಿ ವೀಣಾ ಚೇತನ ಬರದ್ವಾಡ, ಪ್ರಮುಖರಾದ ಪ್ರಶಾಂತ ಜಾಧವ, ರಾಮನಗೌಡ ಶೆಟ್ಟನಗೌಡರ ಉಪಸ್ಥಿತರಿದ್ದರು.