ಶಿರಹಟ್ಟಿ: ದೇಶವನ್ನು ಸುಭದ್ರಗೊಳಿಸಲು ಮತ್ತೊಮ್ಮೆ ನರೇಂದ್ರ ಮೋದಿಯವರ ಕೈ ಬಲಪಡಿಸೋಣ : ಪಟ್ಟಣದಲ್ಲಿ ಶಾಸಕ ಡಾ.ಚಂದ್ರು ಲಮಾಣಿ.
ನಮ್ಮ ದೇಶವನ್ನು ವಿಶ್ವಗುರು ಸ್ಥಾನದಲ್ಲಿ ನಿಲ್ಲಿಸಿದ ಭಾರತ ಮಾತೆಯ ಪುತ್ರ, ಹೆಮ್ಮೆಯ ನಾಯಕ ನರೆಂದ್ರ ಮೋದಿಯಂತಹ ಮಹಾನ್ ವ್ಯಕ್ತಿ ಸಿಕ್ಕಿದ್ದು ನಮ್ಮೆಲ್ಲರ ಸೌಭಾಗ್ಯ. ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ಶಾಸಕನನ್ನಾಗಿ ಮಾಡಿದ್ದು ಬಿಜೆಪಿ ಪಕ್ಷ, ಕಟ್ಟಕಡೆಯ ವ್ಯಕ್ತಿಗೂ ಉನ್ನತ ಹುದ್ದೆಗಳನ್ನು ನೀಡುವ ಎಕೈಕ ಪಕ್ಷ ಬಿಜೆಪಿ ಪಕ್ಷವಾಗಿದೆ. ನಮ್ಮ ಭಾರತ ದೇಶವನ್ನು ಇನ್ನೂ ಸುಭದ್ರಗೊಳಿಸಲು ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯನ್ನಾಗಿಸಿ ಮೋದಿಯವರ ಕೈಬಲಪಡಿಸಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಂಸದರಾಗಿ ಆಯ್ಕೆ ಮಾಡಲು ಪಕ್ಷದ ಪ್ರತಿಯೂಬ್ಬ ಕಾರ್ಯಕರ್ತರು ಕೆಲಸ ಮಾಡಿ ಅವರನ್ನು ಕೇಂದ್ರದ ಮಂತ್ರಿಯನ್ನಾಗಿಸಲು ಶ್ರಮವಹಿಸಿ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.