ಶಿವಮೊಗ್ಗ: ಜಿಲ್ಲೆಯ ಅನಿವಾಸಿ ಕನ್ನಡಿಗರು ಹಾಗೂ ಕುಟುಂಬದವರಿಂದ ಅಹವಾಲು,ದೂರುಗಳನ್ನು ಸ್ವೀಕರಿಸಲು ನಗರದ ಡಿಸಿ ಸಭಾಂಗಣದಲ್ಲಿ ಸಭೆ
ಅನಿವಾಸಿ ಕನ್ನಡಿಗರ ಅವಶ್ಯಕತೆಗಳು ಸಮಸ್ಯೆಗಳಿಗೆ ಸ್ಪಂದಿಸಲು ಪ್ರತ್ಯೇಕವಾದ ಒಂದು ಸಚಿವಾಲಯ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಣಾಳಿಕೆ ಸಲ್ಲಿಸಲಾಗಿದ್ದು, ಈ ಕುರಿತು ನೀತಿ-ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಎಂದು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದರು.ಜಿಲ್ಲೆಯ ಅನಿವಾಸಿ ಕನ್ನಡಿಗರು ಹಾಗೂ ಕುಟುಂಬದವರಿಂದ ಅಹವಾಲು/ದೂರುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಶುಕ್ರವಾರ ಸಂಜೆ 5 ಗಂಟೆಗ ಮಾತನಾಡಿದ ಅವರು ಅನಿವಾಸಿ ಭಾರತೀಯ ಸಮಿತಿಯನ್ನು ರಾಜ್ಯದ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ 2008 ರಲ್ಲಿ ಸ್ಥಾಪಿಸಲಾಗಿದೆ ಎಂದರು.