ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಾಯಕರ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಅವರು, ಇಂದಿನಿಂದ ಸಂಘಟನೆ ಬಲಪಡಿಸುವ ಉದ್ದೇಶದಿಂದ ರಾಜ್ಯಾಧ್ಯಕ್ಷರು ಹಾಗೂ ಬಿಜೆಪಿ ಪ್ರಮುಖರು ಸೇರಿ ಎಲ್ಲಾ ಜಿಲ್ಲಾ ಮುಂಖಡರ ಸಭೆ ಮಾಡುತ್ತಿದ್ದೇವೆ. ಮುಂದಿನ ಚುನಾವಣೆಗಳ ಬಗ್ಗೆ ಚರ್ಚೆ ನಡೆಸಿ ಈ ಸರ್ಕಾರದ ದುರಾಡಳಿತದ ಬಗ್ಗೆ ಜನರ ಗಮನ ಸೆಳೆಯುವ ಹಾಗೂ ಪಕ್ಷದ ಅಭ್ಯರ್ಥಿಗಳ ಗೆಲ್ಲಿಸುವ ಕಡೆ ಗಮನ ಕೊಡಲು ನಿರ್ಧರಿಸಿದ್ದೇವೆ ಎಂದರು.