ಮಹಿಳಾ ಸಬಲೀಕರಣ ಮತ್ತು ಅಸ್ಪೃಶ್ಯತೆಯ ವಿರುದ್ಧ ಹೋರಾಡಿದ ಮಹಾನ್ ಚಿಂತಕ ಮತ್ತು ಸಮಾಜ ಸುಧಾರಕ ಜ್ಯೋತಿಬಾ ಫುಲೆ ಅವರ ಪುಣ್ಯಸ್ಮರಣೆಯನ್ನು ಧಾರವಾಡ ನಗರದಲ್ಲಿ ಎಐಡಿಎಸ್ಓ ಸಂಘಟನೆಯಿಂದ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಳ್ಳಲಾಗಿತ್ತು. ಧಾರವಾಡ ಕರ್ನಾಟಕ ಕಾಲೇಜು ಮೈದಾನ, ಧಾರವಾಡ ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣ ಹಾಗೂ ವಿವಿಧ ಶಾಲಾ ಕಾಲೇಜು ಆವರಣದಲ್ಲಿ ಜ್ಯೋತಿಬಾ ಫುಲೆ ಅವರ ವಿಚಾರಗಳ ಕುರಿತು ಚರ್ಚೆ ಕಾರ್ಯಕ್ರಮ ನಡೆಯಿತು.