ಮಳವಳ್ಳಿ: ಗೂಡ್ಸ್ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತ ದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿರುವ ಘಟನೆ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಜರುಗಿದೆ. ಈ ಗ್ರಾಮದ ಚಂದ್ರು ಅವರ ಪುತ್ರ 20 ವರ್ಷದ ಮೋಹಿತ್ ಮೃತಪಟ್ಟ ದುರ್ದೈಯಾಗಿದ್ದಾನೆ. ಮಾರೇಹಳ್ಳಿ ಕೆರೆ ಏರಿ ರಸ್ತೆಯಲ್ಲಿ ನ.24 ರಂದು ಬೈಕ್ ನಲ್ಲಿ ಹೋಗುತ್ತಿದ್ದ ಈತನಿಗೆ ಎದುರಿ ನಿಂದ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿತ್ತು ಎನ್ನಲಾಗಿದೆ ಮೋಹಿತ್ ತೀವ್ರವಾಗಿ ಗಾಯಗೊಂಡಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿ ತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮಧ್ಯಾಹ್ನ 3.30 ರ ಸಮಯದಲ್ಲಿ ಮೃತಪಟ್ಟನೆಂದು ವರದಿಯಾಗಿದೆ.